ಮಂಗಳೂರು:(ಜು.16) ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರಿನಲ್ಲಿ ಕಾನ್ಸ್ಟೇಬಲ್ನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕಾನ್ಸ್ಟೇಬಲ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಬಂಧಿತ ಕಾನ್ಸ್ಟೇಬಲ್ನನ್ನು ಚಂದ್ರನಾಯಕ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: 💐💐ಪುತ್ತೂರು : 8 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ “ಪಿಕ್ಸೆಲ್ ಸಂಸ್ಥೆ”
ಮಂಗಳೂರಿನ ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ.


ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಸುಧೀರ್ಕುಮಾರ್ ರೆಡ್ಡಿ ಅವರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

