ಉಡುಪಿ:(ಜು.19) ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಶನಿವಾರ (ಜು.19) ನಡೆದಿದೆ.

ಇದನ್ನೂ ಓದಿ: ⭕ಮಂಗಳೂರು: ಸಿ.ಇ. ಟಿ ಹೆಚ್ಚುವರಿ ಶುಲ್ಕ ವಸೂಲಿ ಮಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ
ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕಾಲೇಜಿನ ಬಳಿ ರಸ್ತೆ ಡಿವೈಡರ್ ಬಳಿ ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್ಗಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಅಪಘಾತದ ನಂತರ, ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.


