ಬೆಳ್ತಂಗಡಿ :(ಜು.22) ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಸನ್ಮಾನ್ಯ ಶಾಸಕ ಹರೀಶ್ ಪೂಂಜ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ ಅರಣೆಪಾದೆ, ಕೃಷ್ಣ ರಾವ್ ಕೋಡಿತ್ತಿಲು, ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಹೊಸಮಠ, ಚಾರ್ಮಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಗಣೇಶ್ ಕೋಟ್ಯಾನ್, ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಸುಧೀರ್ ಚಾರ್ಮಾಡಿ, ದಿವಿನೇಶ್ ಚಾರ್ಮಾಡಿ, ಪವನ್ ರಾವ್ ಚಾರ್ಮಾಡಿ ಇವರುಗಳು ಉಪಸ್ಥಿತರಿದ್ದರು.



