Mon. Jul 28th, 2025

ಕೊಡಿಪ್ಪಾಡಿ: ಕಬಕ ಬ್ಲಾಕ್ ನ ಕೊಡಿಪ್ಪಾಡಿಯಲ್ಲಿ ಹಲವು ಯುವಕರು SDPI ಪಕ್ಷಕ್ಕೆ ಸೇರ್ಪಡೆ

ಕೊಡಿಪ್ಪಾಡಿ (ಜು.28) :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಡಿಪ್ಪಾಡಿ ಬ್ರಾಂಚ್ ಸಮಿತಿ ವತಿಯಿಂದ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಕೊಡಿಪ್ಪಾಡಿಯಲ್ಲಿ ನಡೆಯಿತು.

ಇದನ್ನೂ ಓದಿ: ⭕ಬೆಳ್ತಂಗಡಿ: ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ತುರ್ತು ಕಾರ್ಯಾಚರಣೆ


ಪ್ರಸಕ್ತ ರಾಜಕೀಯ ಸನ್ನೀವೇಶ ಮತ್ತು ಪಕ್ಷದ ತತ್ವ ಸಿದ್ದಾಂತದ ಕುರಿತು SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಸವಿಸ್ತಾರವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ 20 ಮಂದಿ – SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಕಾರ್ಯಕ್ರಮದಲ್ಲಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸಿರಾಜ್ ಕೂರ್ನಡ್ಕ, ಕಬಕ ಬ್ಲಾಕ್ ಉಪಾಧ್ಯಕ್ಷರಾದ ಅದ್ದು ಕೊಡಿಪ್ಪಾಡಿ, ಕೊಡಿಪ್ಪಾಡಿ ಬ್ರಾಂಚ್ ಅಧ್ಯಕ್ಷರಾದ ಫಾರೂಕ್ ಅರ್ಕ ಹಾಗೂ ಕೊಡಿಪ್ಪಾಡಿ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶರೀಫ್ ಆನಾಜೆ ಸ್ವಾಗತಿಸಿ, ಹಫೀಝ್ ಆನಾಜೆ ಧನ್ಯವಾದ ಸಮರ್ಪಿಸಿದರು, ಇಬ್ರಾಹಿಂ ಆನಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *