Tue. Aug 12th, 2025

ಮಿತ್ತಬಾಗಿಲು : ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಮಿತ್ತಬಾಗಿಲು :(ಆ.12) ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಮಿತ್ತಬಾಗಿಲು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಕುಕ್ಕಾವು ಶ್ರೀ ಸದಾಶಿವೇಶ್ವರ ದೇವಸ್ಥಾನ ವಠಾರ ದಲ್ಲಿ ನಡೆಯಿತು.

ಇದನ್ನೂ ಓದಿ: 🟣ನಿಡ್ಲೆ: 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ವಾಸುದೇವ ರಾವ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ವಕೀಲರಾದ ಯತೀಶ್ ಪಣೆಕ್ಕರ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿನಬೈಲ್, ವೃಷಾಂಕ್ ಖಾದಿಲ್ಕರ್ ಬೈಠಕ್ ನೀಡಿದರು.

ಲಾಯಿಲ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅರವಿಂದ್ ಲಾಯಿಲ,ರೈತಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು,ಮಂಡಲ ಉಪಾಧ್ಯಕ್ಷರು ಅಭ್ಯಾಸ ವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ, ಪ್ರಭಾರಿ ಗಿರೀಶ್ ಡೊಂಗ್ರೆ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷರಾದ ವಿನಯ ಚಂದ್ರ,ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ಅನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *