Wed. Aug 13th, 2025

ಉಜಿರೆ: ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ರಾಷ್ಟ್ರಧ್ವಜದ ಮಾಹಿತಿ” ಕಾರ್ಯಕ್ರಮ

ಉಜಿರೆ: (ಆ. 13) ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ನಮ್ಮ ದೇಶದ ರಾಷ್ಟ್ರಧ್ವಜದ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ “ರಾಷ್ಟ್ರಧ್ವಜದ ಮಾಹಿತಿ” ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದನ್ನೂ ಓದಿ: 🔴ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ, ಟ್ರಸ್ಟ್ ಗುರುವಾಯನಕೆರೆ ವತಿಯಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಸಂಪನ್ಮೂಲ ವ್ಯಕ್ತಿಯಾಗಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾದ ಶ್ರೀಮತಿ ಶಾರದ ಹಾಗೂ ಶ್ರೀ ಹರೀಶ್ ರಾಷ್ಟ್ರಧ್ವಜದ ಗೌರವ ಕಾಪಾಡುವ ಜವಾಬ್ದಾರಿ ಹಾಗೂ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ವೇದಿಕೆಯಲ್ಲಿ ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಉಪಸ್ಥಿತರಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *