Mon. Sep 8th, 2025

ಬೆಳ್ತಂಗಡಿ :ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.)ಹಾಗೂ ವಿವಿಧ ಸಂಘ ಸಂಸ್ಥೆಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ

ಇದನ್ನೂ ಓದಿ: 🔴ವಿಟ್ಲ: ಅಜ್ಜಿನಡ್ಕ ಒಕ್ಕೂಟದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

ಸೆ .07 ರಂದು ಮಂಗಳಾ ಕ್ರೀಡಾಂಗಣ ಮಂಗಳೂರು ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಈ ತಂಡದಲ್ಲಿ ತಂಡದ ನಾಯಕ ಅಭಿಶ್ರುತ್ ಮುರ ಇಳಂತಿಲ, ವಿಜೇತ್ ಕುಲಾಲ್ ಬಂದಾರು, ಭರತೇಶ್ ಗೌಡ ಬಂದಾರು,ಜಿತೇಶ್ ಕುಲಾಲ್ ಬಂದಾರು, ಅಸಾದ್, ಅನೂಪ್, ಚರಣ್, ಉದಿತ್, ಜಾನು ಪ್ರಕಾಶ್, ಪ್ರಜ್ವಲ್ ಪಿ. ಎಲ್ ಹಾಗೂ ಸುರಕ್ಷಿತ್ ಕುಲಾಲ್ ಬಂದಾರು ಕೋಚಿಂಗ್ ನೀಡಿದರು.

Leave a Reply

Your email address will not be published. Required fields are marked *