Sat. Sep 13th, 2025

ಧರ್ಮಸ್ಥಳ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಭಜನಾ ಕಮ್ಮಟದ ಭಜನಾಪಟುಗಳಿಗೆ “ಭಜನೆಯ ಕಿಟ್‌ ವಿತರಣೆ”

ಧರ್ಮಸ್ಥಳ: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ ಸೆ. 14 ರಿಂದ 21 ರ ವರೆಗೆ ನಡೆಯಲಿದೆ. ಈಗಾಗಲೇ ಧರ್ಮಸ್ಥಳಕ್ಕೆ 200 ರಿಂದ 400 ಮಂದಿ ಭಜನಾಪಟುಗಳು ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭಜನಾ ಪಟುಗಳು ಭೇಟಿಯಾಗಿ ಆಶೀರ್ವಾದ ಪಡೆದರು. ಭಜನಾಪಟುಗಳಿಗೆ ಭಜನೆಗೆ ಬೇಕಾದ ವಸ್ತುಗಳ ಕಿಟ್‌ ಅನ್ನು ಪೂಜ್ಯ ಖಾವಂದರು ವಿತರಿಸಿದರು.


ಉದ್ಘಾಟನಾ ಸಮಾರಂಭವನ್ನು ಮಹೋತ್ಸವ ಸಭಾ ಭವನದಲ್ಲಿ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಭಜನಾ ಕಮ್ಮಟವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಧಾಮ ಮಾಣಿಲದ ಮೋಹನದಾಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.


ಭಜನಾ ಕಮ್ಮಟಕ್ಕೆ ಖ್ಯಾತ ಗಾಯಕರಾದ ಶಂಕರ್‌ ಶಾನ್‌ ಬಾಗ್, ಅರ್ಚನಾ ಉಡುಪ, ರಾಮಕೃಷ್ಣ ಕಾಟುಕುಕ್ಕೆ, ಉಷಾ ಹೆಬ್ಬಾರ್, ಮಣಿಪಾಲ, ಸೌಮ್ಯ ಸುಭಾಷ್, ಧರ್ಮಸ್ಥಳ, ಮಂಗಲದಾಸ ಗುಲ್ವಾಡಿ, ವಿದುಷಿ ಚೈತ್ರಾ, ಉಜಿರೆ, ಸುನಿಲ್ ಶೆಟ್ಟಿ, ಧರ್ಮಸ್ಥಳ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಕಮ್ಮಟದಲ್ಲಿ ಮಾಹಿತಿ, ಮಾರ್ಗದರ್ಶನ ನೀಡಲಿದ್ದಾರೆ.


ಪ್ರತಿ ದಿನ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಧಾರ್ಮಿಕ ಉಪನ್ಯಾಸ, ಸಂಜೆ ಗಂಟೆ 5.30 ರಿಂದ ನಗರಭಜನೆ ಇದೆ.
ಸೆ. 21 ರಂದು ಭಾನುವಾರ ಸಮಾರೋಪ ಸಮಾರಂಭ ನಡೆಯಲಿದ್ದು ಪೂರ್ವಾಹ್ನ 10 ಗಂಟೆಯಿಂದ 400 ಭಜನಾ ತಂಡಗಳ ಆರು ಸಾವಿರ ಭಜನಾಪಟುಗಳಿಂದ ಶೋಭಾಯಾತ್ರೆ ಹಾಗೂ ಅಮೃತವರ್ಷಿಣಿ ಸಭಾಭವನದಲ್ಲಿ ಸಾಮೂಹಿಕ ನೃತ್ಯಭಜನೆ ನಡೆಯಲಿದೆ.

Leave a Reply

Your email address will not be published. Required fields are marked *