Mon. Oct 13th, 2025

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

ಕಲ್ಮಂಜ: ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ದಿನಾಂಕ 05/12/2025ರಂದು ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ

ಕಲ್ಲಿಗೆ ವಿಜಯ ದಶಮಿಯ ಪುಣ್ಯ ದಿನದಂದು ಕ್ಷೇತ್ರದ ವತಿಯಿಂದ ಅರ್ಚಕರಾದ ರಾಜೇಶ್ ಹೊಳ್ಳ ರವರು ಕ್ಷೇತ್ರದಿಂದ ತೀರ್ಥ ಪ್ರೋಕ್ಷಣೆ ಹಾಗೂ ಪೂಜೆ ಮಾಡಿ ಕೆತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಸುಕನ್ಯಾ ಮತ್ತು ಶ್ರೀ ಡಿ. ಜಯರಾಮ್ ರಾವ್ ಮತ್ತು ಮಕ್ಕಳು, ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಶಿಲ್ಪಿಗಳಾದ ಸುಧಾಕರ್ ಡೋಂಗ್ರೆ ಮತ್ತು ಶಿಲ್ಪಿ ಬಳಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *