Tue. Dec 16th, 2025

Arasinamakki: ಬಾವಿಗೆ ಬಿದ್ದು ಮೃತರಾದ ತೇಜಸ್ವಿನಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಅರಸಿನಮಕ್ಕಿ: ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ: 🔴ಬೆಳ್ತಂಗಡಿ : ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ


ಈ ಸಂದರ್ಭದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿಗಳಾದ ಗಣೇಶ್ ಹೊಸ್ತೋಟ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ವೃಷಾಂಕ್ ಖಾಡಿಲ್ಕರ್, ಗಣೇಶ್ ಪಲಸ್ತಡ್ಕ, ಶ್ರೀಕಾಂತ್ ಕಾಂತ್ರೆಲ್, ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *