Tue. Oct 28th, 2025

Bandaru: ಇತ್ತೀಚೆಗೆ ಹೃದಯಘಾತದಿಂದ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬಂದಾರು: (ಅ. 28) ಇತ್ತೀಚೆಗೆ ಹೃದಯಘಾತದಿಂದ ಮೃತರಾದ ಬಂದಾರು ಗ್ರಾಮ ಪೆರ್ಲ- ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಮೊಕ್ತೇಸರರಾದ ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡರವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ: 🔴ಬೆಳ್ತಂಗಡಿ: ಗುರುವಾಯನಕೆರೆ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ಯ ನೂತನ ಕಟ್ಟಡ ಉದ್ಘಾಟನೆ

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವಮೋರ್ಚಾ ಮಂಡಲಾಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಡೀಕಯ್ಯ ಗೌಡ ಕoಚರೊಟ್ಟು,

ಪೆರ್ಲ -ಬೈಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು, ಪ್ರಮುಖರಾದ ಹೊನ್ನಪ್ಪ ಗೌಡ ಸೋಣಕುಮೇರು, ದಿನೇಶ್ ಗೌಡ ಅಡ್ಡಾರು, ಲೋಕ್ಷತ್ ಗೌಡ ಅನಿಲ, ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *