ಬೆಳ್ತಂಗಡಿ:(ನ.6) ವ್ಯಕ್ತಿಯೋರ್ವರು ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿಯ ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಬಶೀರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ನೇಣುಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮೃತದೇಹವನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಇವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.





