Mon. Dec 1st, 2025

ಬೆಳ್ತಂಗಡಿ: ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಫರ್ಧೆಯಲ್ಲಿ ಕು.ಅದ್ವಿತಿ ರಾವ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಸೊಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಶಿರಸಿ ,ಇವರು ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಿದ ಶ್ರೀ ಭಗವದ್ಗೀತಾ ಅಭಿಯಾನ- 2025 ರ ಹಿರಿಯ ಪ್ರಾಥಮಿಕ ವಿಭಾಗದ ರಾಜ್ಯ ಮಟ್ಟದ ಕಾರ್ಯಕ್ರಮವು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆಯಿತು.

ಇದನ್ನೂ ಓದಿ: 🟣ಬೆಳ್ತಂಗಡಿ:(ಡಿ.04 – ಡಿ. 05) ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ & ಶೋಭಾ ಯಾತ್ರೆ

ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲಾ ವಿದ್ಯಾರ್ಥಿನಿ ಕು.ಅದ್ವಿತಿ ರಾವ್ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶಿವಮೊಗ್ಗ ಕೇಂದ್ರವಾಗಿ ಈ ವರ್ಷ ನಡೆದ ಅಭಿಯಾನದ ಸಮಾರೋಪಕ್ಕೆ ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಸಾಕ್ಷಿಯಾದರು.

Leave a Reply

Your email address will not be published. Required fields are marked *