Mon. Dec 1st, 2025

Puttur: ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುಡ್ಡದಲ್ಲಿ ಪತ್ತೆ

ಪುತ್ತೂರು: ನಾಪತ್ತೆಯಾಗಿದ್ದ ಬದ್ರುದ್ದೀನ್ ಡಿಕೆ (27) ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

ಬದ್ರುದ್ದೀನ್ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ.

ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದ್ದು, ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.

Leave a Reply

Your email address will not be published. Required fields are marked *