ಶಿಶಿಲ : ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ಶಿಶಿಲದಲ್ಲಿ ನಡೆದಿದೆ.

ಇದನ್ನೂ ಓದಿ: 💐💐ಮಂಗಳೂರು: ಶ್ರೀ ಪಂಡಿತ ರಾಮಕೃಷ್ಣ ಶಾಸ್ತ್ರೀ ರವರಿಗೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಗುಡ್ಡೆತೋಟ ನಿವಾಸಿ ಪ್ರೇಮ ( 55ವ.) ಮೃತ ಮಹಿಳೆ. ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಮಹಿಳೆಗೆ ನಾಗರಹಾವು ಕಡಿದಿದ್ದು, ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದಿಗೆ ಕರೆದೊಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.





