ಬೆಳಗಾವಿ: ಮೂರು ಮಕ್ಕಳ ತಾಯಿ ಜತೆ ನಾಲ್ಕು ವರ್ಷಗಳಿಂದ ಯಕ್ಸಂಬಾ ಪಟ್ಟಣದ ಅಕ್ಷಯ ಕಲ್ಲಟಗಿ ಎಂಬ ಯುವಕ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಯುವಕನ ಮೇಲೆ ಮಹಿಳೆಯ ಪತಿ ಹಾಗೂ ಆತನ ಸಹೋರ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ಬಾ ಎಂದು ಕರೆದಿದ್ದ ಮಹಿಳೆ: ನಂಬಿ ಹೋದವನಿಗೆ ಬಿತ್ತು ಗೂಸಾ
ರಾತ್ರಿ ಭೇಟಿಯಾಗಲು ಬಾ ಎಂದು ಅಕ್ಷಯ್ಗೆ ಮಹಿಳೆಯೇ ಕರೆ ಮಾಡಿ ಹೇಳಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಅದರಂತೆ ಅಕ್ಷಯ್ ಆಕೆಯ ಭೇಟಿಯಾಗಲು ತೆರಳಿದ್ದಾರೆ. ಈ ವೇಳೆ, ಅಕ್ಷಯನನ್ನು ದಾರಿ ಮಧ್ಯೆ ತಡೆದ ಮಹಿಳೆಯ ಗಂಡ ಹಾಗೂ ಆಕೆಯ ಸಹೋದರ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಗ್ಗಾಮುಗ್ಗಾ ಹಲ್ಲೆ ನಡೆದಿದ್ದರಿಂದ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದಾನೆ.




