ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರು ವಲಯದ ಪಡ್ಡತದಡ್ಕ ದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಸಲಾಯಿತು.

ವೇಣೂರು ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಕಾನೂನು ಪಾಲನೆ ರಕ್ಷಣೆ ಹಾಗೂ ನಿಯಮಗಳ ಬಗ್ಗೆ ತಿಳಿಸಿದರು. ಕಾನೂನನ್ನು ಗೌರವಿಸುವ ಬಗ್ಗೆ ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಅಶ್ವಿನಿ ಡಿ ಸೋಜ ರವರು ಮಾತನಾಡಿ ಮಹಿಳೆಯರ ಹಕ್ಕು, ಮಾನವೀಯತೆ ಗುಣಗಳನ್ನು ನಮ್ಮಲ್ಲಿ ಬೆಳೆಸಿಕೊಳ್ಳುವ ಬಗ್ಗೆ ತಿಳಿಸಿದರು.



ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ ಯವರು ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಶೋಭಾ ಹಾಗೂ ಜಯಂತಿಯವರು ಒಕ್ಕೂಟ ದ ಅಧ್ಯಕ್ಷರು ವಿಲಿಯಮ್ ರೆಗೋ ಮತ್ತು ಪ್ರವೀಣ್ ನಾಯ್ಕರವರು ಉಪಸ್ಥಿತರಿದ್ದರು.








