ಬೆಳ್ತಂಗಡಿ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿತರಾಗಿರುವ ಅವರ ಪತ್ನಿ, ಸೌಮ್ಯ ಶೆಟ್ಟಿಗೆ ಇದೀಗ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಜಾಮೀನು ಕೋರಿ ಸೌಮ್ಯ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಸೆಷನ್ಸ್ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.
ಮಾ. 22ರಂದು ಸುದೀಪ್ ರೈ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ ಶೆಟ್ಟಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ್ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಕಲಾವಿದೆ ಸೌಮ್ಯ ಶೆಟ್ಟಿಯನ್ನು ಎ. 11ರಂದು ಉಡುಪಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿಗಾಗಿ ಸೌಮ್ಯ ಶೆಟ್ಟಿ ಉಡುಪಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಪ್ರಾಸಿಕ್ಯೂಶನ್ ಪರ ವಾದಿಸಿದ್ದರು.







