ಬೆಳ್ತಂಗಡಿ : ಬೆಳ್ತಂಗಡಿ: ತಾಲೂಕಿನ ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗೆ ವೇಣೂರು ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಒಟ್ಟು 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ನಗದು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ 17 ರಂದು ರಾತ್ರಿ 7:30 ಕ್ಕೆ ಈ ಕಾರ್ಯಾಚರಣೆ ನಡೆಸಲಾಗಿದೆ.
ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್ (37) , ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40), ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38), ವೇಣೂರು ಶಿವಾಜಿನಗರದ ಶೇಖರ್(50) ಮರೋಡಿಯ ಸಧಾಕರ(42), ಗರ್ಡಾಡಿಯ ನವಾಜ್(26), ಗೇರುಕಟ್ಟೆ ಜನತಾಕಾಲೋನಿಯ ಇಕ್ಯಾಲ್(37), ಕುಕ್ಕೇಡಿಯ ಕಿರಣ್ (35), ವೇಣೂರು ಶಿವಾಜಿನಗರದ ಲಕ್ಷ್ಮಣ(51), ಬೆಳ್ತಂಗಡಿ ಲಾಯಿಲದ ನಿಸಾರ್(47), ಬೆಳ್ತಂಗಡಿ ತೆಂಕಎಡಪದವು ಜೀವಂಧರ್ ಕುಮಾರ್(36), ಗುರುವಾಯನಕೆರೆಯ ಸಂತೋಷ್(37), ಸೊಣಂದೂರು ಅಬ್ದುಲ್ ಅಜೀಜ್ (40) ಬಂಧಿತ 17 ಮಂದಿ ಆರೋಪಿಗಳು.
ಆರೋಪಿಗಳು ಜೂಜಾಟಕ್ಕೆ ಬಳಸಿದ 69 ಸಾವಿರ ರೂಪಾಯಿ ಹಣ, ಎರಡು ಆಟೋ ರಿಕ್ಷಾ, 20 ಮೊಬೈಲ್ ಫೋನ್ ವಶಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ 17 ಮಂದಿ ಆರೋಪಿಗಳ ವಿರುದ್ಧ ಕಲಂ 87 ಕೆ.ಪಿ.ಆಕ್ಟ್, 112 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಡವಗಿ, ಎಎಸ್ಐ ವೆಂಕಟೇಶ್, ಸಿಬ್ಬಂದಿ ಅಬ್ದುಲ್ ಲತೀಫ್, ಕೃಷ್ಣ, ವಸಂತ, ಮೋಹನ, ರಾಕೇಶ್, ಕಾಳಮ್ಮ, ಕಾವೇರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.





