ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ರಾಜಶ್ರೀ ಹಾಗೂ ದೈಹಿಕ ಶಿಕ್ಷಣ ಪರೀಕ್ಷಕರಾದ ಶ್ರೀ ಪ್ರಭಾಕರ್ ಭೇಟಿ ನೀಡಿ ಶಾಲೆಯ ವಿವಿಧ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು.



ಈ ಸಂದರ್ಭದಲ್ಲಿ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ‘ಶ್ರೀ ಮಂಜುನಾಥ ದಳ’ ರಾಷ್ಟ್ರೀಯ ಮಟ್ಟದಲ್ಲಿ ಪಡೆದಿರುವ ಪ್ರತಿಷ್ಠಿತ ಗೋಲ್ಡನ್ ಆ್ಯರೋ ಪ್ರಶಸ್ತಿ ಕುರಿತು ಪರಿಶೀಲನೆ ನಡೆಸಿ, ಶಾಲೆಯ ಯೋಗ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶೈಕ್ಷಣಿಕ ಫಲಿತಾಂಶಗಳ ಕುರಿತು ಮಾಹಿತಿ ಸಂಗ್ರಹಿಸಿದರು.
ಅಲ್ಲದೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಾದ ಚಿರಾಗ್, ಅಹನ್ ಜೈನ್, ವಿಹಾನ್, ದೈವಿಕ್ ರೈ, ಆದ್ವಿ ಎಲ್. ರೈ ಹಾಗೂ ಯಕ್ಷಿತಾ ಅವರನ್ನು ರಾಷ್ಟ್ರೀಯ ಮಟ್ಟದ ಸಾಧನೆಗಾಗಿ ಅಭಿನಂದಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶಾಲಾ ಶಿಕ್ಷಕಿ ಪ್ರಮೀಳ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಎನ್., ಚಿತ್ರಕಲಾ ಶಿಕ್ಷಕರಾದ ಜಯರಾಮ್ ಹಾಗೂ ಕನ್ನಡ ಶಿಕ್ಷಕರಾದ ಶ್ರೇಯಾಂಸ ಜೈನ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.







