ಅಜೆಕಾರು:(ಫೆ.6) ಕೆರ್ವಾಶೆಯ ಬಂಗ್ಲೆಗುಡ್ಡೆ ಜಂಕ್ಷನ್ನಲ್ಲಿ ಫೆ. 5 ರಂದು ಮಧ್ಯಾಹ್ನ ಅಜೆಕಾರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
![](https://uplustv.com/wp-content/uploads/2025/02/WhatsApp-Image-2024-10-18-at-11.21.38_8ae796c7-1-667x1024.jpg)
ಇದನ್ನೂ ಓದಿ: ವಿಟ್ಲ: ಸಿಂಗಾರಿ ಬೀಡಿ ಮಾಲೀಕರ ಮನೆಯಲ್ಲಿ ದರೋಡೆ ಪ್ರಕರಣ
ಅಜೆಕಾರು ಪೊಲೀಸ್ ಠಾಣೆ ಪಿಎಸ್ಐ ಪ್ರವೀಣ್ ಕುಮಾರ್ ಆರ್ ಅವರು ತಮ್ಮ ಸಿಬ್ಬಂದಿಯೊಂದಿಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಕೆರ್ವಾಶೆ ಕಡೆಯಿಂದ ಅತಿವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿದ್ದಾರೆ.
ಲಾರಿಯನ್ನು ನಿಲ್ಲಿಸಿದ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಶ್ಲೇಶ್ ಎಂಬವರಿಗೆ ಸೇರಿದ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡು 15 ಸಾವಿರ ಮೌಲ್ಯದ 3 ಯೂನಿಟ್ ಮರಳನ್ನು ಸೀಜ್ ಮಾಡಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://uplustv.com/wp-content/uploads/2025/02/51b5a0cd-f9b6-499f-a45b-f15e5ee2ea78-1-1024x1024.jpg)
![](https://uplustv.com/wp-content/uploads/2025/02/057b1d26-13c1-450b-9ca4-33b6e7226863-1-810x1024.jpg)
![](https://uplustv.com/wp-content/uploads/2025/02/muli-1.jpg)
![](https://uplustv.com/wp-content/uploads/2025/02/u-plus-poster-1.jpg)
![](https://uplustv.com/wp-content/uploads/2025/02/WhatsApp-Image-2024-07-12-at-16.54.12_23b03a5a-1.jpg)