ಬಂಟ್ವಾಳ:(ಫೆ.6) ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ.
![](https://uplustv.com/wp-content/uploads/2025/02/WhatsApp-Image-2024-10-18-at-11.21.38_8ae796c7-1-667x1024.jpg)
ಇದನ್ನೂ ಓದಿ: ಕೇರಳ: ಮದುವೆಯ ಹಿಂದಿನ ದಿನವೇ ನೇಣಿಗೆ ಶರಣಾದ ಯುವತಿ!!
ತೊಕೊಟ್ಟುವಿನ ಕಲ್ಲಾಪು ನಿವಾಸಿ ಅನ್ಸಾರ್ ಎಂಬವರ ಮಾಲಕತ್ವದ ಕಲ್ಲಡ್ಕ ಸೂಪರ್ ಬಜಾರ್ ಇದಾಗಿದ್ದು, ಮಂಗಳವಾರ ರಾತ್ರಿ ವೇಳೆ ಶಟರ್ ನ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಡ್ರಾಯರ್ ನಲ್ಲಿರಿಸಿದ್ದ ರೂ.58 ಸಾವಿರ ಹಣವನ್ನು ಕಳ್ಳತನ ಮಾಡಿದ್ದಾರೆ. ಜೊತೆಗೆ ಅಂಗಡಿಯಲ್ಲಿರುವ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಬಗ್ಗೆ ತಿಳಿಸಿದ್ದಾರೆ.
![](https://uplustv.com/wp-content/uploads/2025/02/51b5a0cd-f9b6-499f-a45b-f15e5ee2ea78-1-1024x1024.jpg)
![](https://uplustv.com/wp-content/uploads/2025/02/057b1d26-13c1-450b-9ca4-33b6e7226863-1-810x1024.jpg)
ಕಲ್ಲಡ್ಕ ಪೇಟೆಯಲ್ಲಿ ಈ ಅಂಗಡಿ ಇದ್ದು ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡೇ ಇರುವುದಾಗಿದೆ. ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ರಾತ್ರಿಯಲ್ಲಿಯೂ ಈ ರಸ್ತೆಯಲ್ಲಿ ವಾಹನಗಳ ಸಂಚಾರ ತಪ್ಪುವುದಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕಳ್ಳರು ಅಂಗಡಿಯೊಳಗೆ ನುಗ್ಗಿ ಕಳ್ಳತನವಾಗಿದೆ ಎಂಬುದು ಇಲ್ಲಿನ ವರ್ತಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
![](https://uplustv.com/wp-content/uploads/2025/02/muli-1.jpg)
ಸುಮಾರು ಮೂರು ತಿಂಗಳ ಹಿಂದೆ ಇಲ್ಲಿನ ಪ್ರಸಿದ್ಧ ಕೆ.ಟಿ.ಹೋಟೆಲ್ ನಿಂದ ಕಳ್ಳತನ ವಾಗಿದ್ದು, ಕಳವು ಮಾಡುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿತ್ತು. ಇದೀಗ ಮತ್ತೆ ಕಲ್ಲಡ್ಕ ದಲ್ಲಿ ಅಂಗಡಿಯಿಂದ ಕಳ್ಳರ ಹಾವಳಿ ಶುರುವಾಗಿದ್ದು, ಕಲ್ಲಡ್ಕ ದ ಜನರನ್ನು ನಿದ್ದೆಗೆಡಿಸಿದೆ. ಕಳ್ಳತನ ಪ್ರಕರಣದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
![](https://uplustv.com/wp-content/uploads/2025/02/u-plus-poster-1.jpg)
![](https://uplustv.com/wp-content/uploads/2025/02/WhatsApp-Image-2024-07-12-at-16.54.12_23b03a5a-1.jpg)