Mon. Mar 10th, 2025

Navoor: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ.) ವತಿಯಿಂದ “ಮನೆ ಮನೆಗೆ ಗಂಗಾಜಲ ತೀರ್ಥ ವಿತರಣೆ”

ನಾವೂರು :(ಮಾ.1) 144 ವರ್ಷಗಳಿಗೊಮ್ಮೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನ ನಡೆಯುವ ಮಹಾ ಪೂರ್ಣ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ವಿಷ್ಣು ಸಹಸ್ರನಾಮ ಪಠಣ ಮಾಡಿ

ಇದನ್ನೂ ಓದಿ: 🟠ಧರ್ಮಸ್ಥಳ: ಶ್ರೀ ಧ.ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

ಪವಿತ್ರ ತೀರ್ಥ ಸ್ನಾನ ಮಾಡಿ ತಂದಿರುವ ಗಂಗಾಜಲ ತೀರ್ಥವನ್ನು ಫೆ.28 ರಂದು ದೇವಸ್ಥಾನದ ಪ್ರಧಾನ ಅರ್ಚಕರಾದ ದಿನೇಶ್ ಭಟ್ ಇವರ ಪೌರೋಹಿತ್ಯದಲ್ಲಿ ಶ್ರೀ ಗೋಪಾಲಕೃಷ್ಣ ದೇವರಿಗೆ ರಂಗಪೂಜೆ ನೆರವೇರಿಸಿ ಗಂಗಾಜಲಕ್ಕೆ ಪೂಜೆ ಹಾಗೂ ಆರತಿಯನ್ನು ಮಾಡಿ ಸಾಮೂಹಿಕ ಪ್ರಾರ್ಥನೆಯನ್ನು ನೆರವೇರಿಸಿ ಭಕ್ತರಿಗೆ ಗಂಗಾಜಲ ತೀರ್ಥವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ಪೂರ್ವಾಧ್ಯಕ್ಷ ಎ.ಬಿ. ಉಮೇಶ್ ಅತ್ಯಡ್ಕ, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧರ್ಣಪ್ಪ ಮೂಲ್ಯ, ದೇವಸ್ಥಾನದ ಜಾತ್ರಾ ಮಹೋತ್ಸವದ ಅಧ್ಯಕ್ಷ ಡಾ| ಪ್ರದೀಪ್, ಎಸ್. ಎನ್. ಭಟ್ ಹಾಗೂ ಟ್ರಸ್ಟ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕುಂಭಮೇಳದಲ್ಲಿ ಪಾಲ್ಗೊಂಡ ಎಲ್ಲಾ ಭಕ್ತರು ಉಪಸ್ಥಿತರಿದ್ದರು. ನಾವೂರು ಗ್ರಾಮದ ಪ್ರತೀ ಮನೆಯ ಭಕ್ತರು ಹಾಗೂ ಗ್ರಾಮದ ಭಕ್ತರು ಪಾಲ್ಗೊಂಡು ಗಂಗಾಜಲವನ್ನು ಪಡೆದುಕೊಂಡರು.

Leave a Reply

Your email address will not be published. Required fields are marked *