Fri. Mar 14th, 2025

Puttur: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ – ಪ್ರಚೋದನೆ ನೀಡಿದ್ದು ಯಾರು ಗೊತ್ತಾ?!

ಪುತ್ತೂರು:(ಮಾ.14) ಕೆಎಸ್ಆರ್‌ ಟಿಸಿ ಬಸ್ಸಿನಲ್ಲಿ ಕಾಲೇಜಿಗೆ ಬರುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಇದನ್ನೂ ಓದಿ: 🔴ಉಜಿರೆ: “ಕಲಾನ್ಕುರ” ಕೊಲಾಜ್ ಸ್ಪರ್ಧೆ ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ(ರಾಜ್ಯ ಪಠ್ಯಕ್ರಮ) ಗೆ ಪ್ರಥಮ ಬಹುಮಾನ

ಬೆಳ್ತಂಗಡಿ ಕಡೆಯಿಂದ ಕೆಎಸ್ಆರ್‌ ಟಿಸಿ ಬಸ್ಸಿನಲ್ಲಿ ಪುತ್ತೂರು ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಗೆ ಅದೇ ಬಸ್‌ನಲ್ಲಿದ್ದ ಪುತ್ತೂರು ಖಾಸಗಿ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ಕಿರುಕುಳ ನೀಡಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಆ ಹುಡುಗನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಾರಣೆ ಬಳಿಕ ಅಚ್ಚರಿ ಸಂಗತಿ ಒಂದು ಬಹಿರಂಗವಾಗಿದೆ. ಆತ ಗೇರುಕಟ್ಟೆಯ ನಿವಾಸಿಯಾಗಿದ್ದು, ಈ ಕೃತ್ಯ ಎಸಗಲು ಆತನ ಮಾವ ಮತ್ತು ಚಿಕ್ಕಪ್ಪನ ಪ್ರಚೋದನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಯುವಕ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾನೆ.

ಇನ್ನೂ ಘಟನೆಯ ಬಗ್ಗೆ ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಮತ್ತು ಆತನಿಗೆ ಪ್ರಚೋದನೆ ನೀಡಿದ ಸಂಬಂಧಿಕರಿಬ್ಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *