Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Bantwala: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ವತಿಯಿಂದ ಉಚಿತ ಸಾಮೂಹಿಕ ವಿವಾಹ , ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

ಬಂಟ್ವಾಳ:(ಮಾ.17) ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41 ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 17 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 7 ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪಾದರ್ಪಣೆಗೈದರು.

ಇದನ್ನೂ ಓದಿ: 🟣ಬೆಳ್ತಂಗಡಿ:(ಮಾ.19) ಬೆಳ್ತಂಗಡಿ ಮಹಾವೀರ ಸೂಪರ್‌ ಮಾರ್ಕೆಟ್‌ ನವೀಕರಣಗೊಂಡು


ಅರ್ಚಕರಾದ ವೇ.ಮೂ.ಶ್ರೀ ಕೃಷ್ಣಭಟ್ ಕಾರ್ಕಳ ಮತ್ತವರ ತಂಡದ ಪೌರೋಹಿತ್ಯದಲ್ಲಿ
ಮಧ್ಯಾಹ್ನ 12.04ರ ಶುಭ ಮುಹೂರ್ತದಲ್ಲಿ 7 ಜೋಡಿ ವಧು-ವರರು ಗೃಹಸ್ಥಾಶ್ರಮಕ್ಕೆ ಕಾಲಿರಿಸಿದರು. ಬೆಳಗ್ಗೆ ನಯನಾಡು ಶ್ರೀ ರಾಮ ಭಜನಾ ಮಂದಿರದಿಂದ ಮದುವೆ ಮಂಟಪದವರೆಗೆ ವೈಭವಪೂರ್ಣವಾದ ದಿಬ್ಬಣ ಮೆರವಣಿಗೆ ನಡೆಯಿತು.


ಬಳಿಕ ನಡೆದ ಸಭಾಕಾರ್ಯಕ್ರಮವನ್ನು ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಉದ್ಘಾಟಿಸಿ ಮಾತನಾಡಿ, ಅಶಕ್ತರ, ನೊಂದವರ ಬಾಳಿಗೆ ಬೆಳಕಾವುದು ನಿಜವಾದ ಸಮಾಜ ಸೇವೆಯಾಗಿದ್ದು, ತುಂಗಪ್ಪ ಬಂಗೇರ ಮತ್ತವರ ತಂಡದ ಕಾರ್ಯ ಮುಂದಿನ ಪೀಳಿಗೆಗೆ ಪ್ರರೇಣೆ ಮತ್ತು ಇತರರಿಗೆ ಮಾದರಿಯಾಗಿದೆ ಎಂದರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಮಾತನಾಡಿ, ಭವಿಷ್ಯದ ದಿನಗಳಲ್ಲಿಯು ಈ ಕಾರ್ಯಕ್ರಮ ನಿರಂತರ ವಾಗಿ ನಡೆಯಲಿ ಎಂದು ಹಾರೈಸಿದರು.


ಬಂಟ್ವಾಳ ತಾ.ಸಂಸ್ಕಾರ ಭಾರತಿ ಅಧ್ಯಕ್ಷರು,ಖ್ಯಾತ ಜ್ಯೋತಿಷಿ ಅನಿಲ್ ಪಂಡಿತ್,ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ,ಅದಾನಿ ಗ್ರೂಪ್ ಮಂಗಳೂರು ಅಧ್ಯಕ್ಷ ಕಿಶೋರ್ ಆಳ್ವ, ಮಾಜಿ ಮುಖ್ಯಮಂತ್ರಿಯವರ ಆಪ್ತಸಹಾಯಕರಾದ ಜಗನ್ನಾಥ ಬಂಗೇರ,ಬಂಟ್ವಾಳ ತಾ.ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ
ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ವ್ಯ.ಸೇ.ಸ.ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ,ಪಿಲಾತಬೆಟ್ಟು ಕೃ.ಪ.ಸ.ಸಂಘದ ಉಪಾಧ್ಯಕ್ಷ ರವಿಶಂಕರ್ ಹೊಳ್ಳ,ಗುತ್ತಿಗೆದಾರ ಮೋಹನ್ ಶೆಟ್ಟಿ ನರ್ವಲ್ದಡ್ಕ,ವಾಮದಪದವು ಕೃ.ಪ.ಸ.ಸಂಘದ ಅಧ್ಯಕ್ಷ ಸಂಜೀವಪೂಜಾರಿ ಪಿಲಿಂಗಾಲು,ಶ್ರೀ.ಕ್ಷೇ.ಧ.ಗ್ರಾ.ಯೋ.ಯ ತಾಲೂಕು ಯೋಜನಾಕಾರಿ ಜಯಾನಂದ ಪಿ.,ಉದ್ಯಮಿಗಳಾದ ಹರೀಂದ್ರ ಪೈ,ಜಯಚಂದ್ರ ಬೊಳ್ಮಾರ್,

ಪಿಲಾತಬೆಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷೆ ಹರ್ಷಿಣಿ ಪುಪ್ಪಾನಂದ ,ಬಡಗಕಜೆಕಾರು ಕೃ.ಪ.ಸ.ಸಂಘದ ಅಧ್ಯಕ್ಷ ಸತೀಶ್ ಪೂಜಾರಿ,ಉದ್ಯಮಿ ಕರುಣಾಕರ ಪೂಜಾರಿ ಮಾಳಿಗೆ ಮನೆ,ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರ.ಕಾರ್ಯದರ್ಶಿ ಪ್ರಶಾಂತ್ ,ಕುತ್ತಿಲ ಗರಡಿ ಸಮಿತಿ ಅಧ್ಯಕ್ಷ ಸುಶಾಂತ್ ಕರ್ಕೇರ,ಉದ್ಯಮಿ ಸುರೇಶ್ ಕರ್ಕೇರ,ಸಿದ್ದಕಟ್ಟೆ ಕೃ.ಪ.ಸ.ಸಂಘದ ಅಧ್ಯಕ್ಷೆ ಪ್ರಭಾಕರ ಪ್ರಭು,ನ್ಯಾಯವಾದಿ ಅನಿಲ್ ಕುಮಾರ್,ತುಂಬೆ ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಸಾಲಿಯಾನ್,ಸುನೀಲ್ ಗಾಯಕ್ ವಾಡ್ ಮುಂಬೈ,ಕೊರಂಟಬೆಟ್ಟ ಗರಡಿ ಸಮಿತಿ ಅಧ್ಯಕ್ಷ ಸದಾನಂದ ಪೂಜಾರಿ ಕೊರಂಟಬೆಟ್ಟು ಅತಿಥಿಗಳಾಗಿ ಭಾಗವಹಿಸಿದ್ದರು.


ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ,ಸಂಚಾಲಕ ರಾಜೇಶ್ ಪಿ.ಪುಂಜಾಲಕಟ್ಟೆ, ಪದಾಕಾರಿಗಳಾದ ಮಾಧವ ಬಂಗೇರ,ಜಯರಾಜ್ ಅತ್ತಾಜೆ ಮೊದಲಾದವರಿದ್ದರು.


ಕ್ಲಬ್ ನ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಅವರು ಸ್ವಾಗತಿಸಿದರು.ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರಪ್ರಸ್ತಾವಿಸಿ ಇದುವರೆಗೆ 498 ಜೋಡಿಗಳಿಗೆ ವಿವಾಹ ಮಾಡಲಾಗಿದೆ. ಸಾಮೂಹಿಕ ವಿವಾಹಗಳಿಗೆ ಕೇಂದ್ರ ಸರಕಾರ ಒತ್ತು ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುವಂತೆ ಸಂಸದರಲ್ಲಿ ಮನವಿ ಮಾಡಿದರು.ರಂಗಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.

ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ:
ಇದೇ ವೇಳೆ ಹರೀಶ್ ಪೂಜಾರಿ(ಉದ್ಯಮ ), ಅಬ್ದುಲ್ ಕುಂಞಿ(ಸಮಾಜ ಸೇವೆ) , ಸಾಯಿ ಸುಮಾ ನಾವಡ(ಯಕ್ಷಗಾನ), ಶಶಿಧರ ಆಚಾರ್ಯ (ಶಿಲ್ಪಕಲೆ),ಸಂದೇಶ್ ಮದ್ದಡ್ಕ(ಧಾರ್ಮಿಕ) ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

Leave a Reply

Your email address will not be published. Required fields are marked *