ಗುರುವಾಯನಕೆರೆ:(ಮೇ.1) ಗುರುವಾಯನಕೆರೆಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಯವರಾದ ಹರೀಶ್ ಆರಿಕೋಡಿ ರವರು ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಹೆಜಮಾಡಿ ದುರ್ಗಶ್ರೀ ಜುವೆಲ್ಲರ್ಸ್ ನ ಮಾಲಕ ಸುಂದರ ಬಿ., ಉಜಿರೆ ಶ್ರೀ ಶಾರದ ಮತ್ತು ಶಾಂತರಾಮ ಜುವೆಲ್ಲರ್ಸ್ ಮಾಲಕ ಆನಂದ ಆಚಾರ್ಯ, ಗುರುವಾಯನಕೆರೆ ನಿಸರ್ಗ ಕರ್ಟನ್ & ವಾಲ್ ಪೇಪರ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ಉಪಸ್ಥಿತರಿದ್ದು, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಹೋದರರಾದ ಉಜಿರೆ ಶುಭ ಜುವೆಲ್ಲರ್ಸ್ ನ ಮಾಲಕ ಸುಧಾಕರ ಆಚಾರ್ಯ, ದಿವಾಕರ ಆಚಾರ್ಯ, ತಾಯಿ ಲಲಿತಾ ಈಶ್ವರಪ್ಪ ಆಚಾರ್ಯ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ಬಂದಂತಹ ಅತಿಥಿ ಗಣ್ಯರನ್ನು ಮಾಲಕ ಪ್ರಭಾಕರ ಆಚಾರ್ಯ ಹಾಗೂ ಶ್ರೀಮತಿ ಉಮಾ ಪ್ರಭಾಕರ ಆಚಾರ್ಯ ಸ್ವಾಗತಿಸಿ ಸತ್ಕರಿಸಿದರು.
916 ಹಾಲ್ಮಾರ್ಕ್ ಚಿನ್ನ-ಬೆಳ್ಳಿ ಆಭರಣ ತಯಾರಕರು ಮತ್ತು ಮಾರಾಟಗಾರರು ಆಭರಣಗಳ ಒಪ್ಪ, ಗಿಫ್ಟ್ ಐಟಂಗಳು, ದೈವ ದೇವರುಗಳ ಮೂರ್ತಿಗಳು, ಹರಕೆಯ ಸಾಧನಗಳು ಹಾಗೂ ಇತರ ಎಲ್ಲಾ ರೀತಿಯ ಚಿನ್ನ-ಬೆಳ್ಳಿಯ ಆಭರಣಗಳು ಮಳಿಗೆಯಲ್ಲಿ ಲಭ್ಯವಿರುತ್ತದೆ ಎಂದು ಮಾಲಕ ಪ್ರಭಾಕರ ಆಚಾರ್ಯ ತಿಳಿಸಿದ್ದಾರೆ.



