Mon. Jun 2nd, 2025

Beltangady: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

ಬೆಳ್ತಂಗಡಿ:(ಮೇ.28) ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ರಂಗ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: ⭕ಕಾಶಿಪಟ್ಣ: ಕಾಶಿಪಟ್ಣದ ಯುವಕ ದೀಪಕ್ .ಕೆ ಸಾಲ್ಯಾನ್ ಅನಾರೋಗ್ಯದಿಂದ ನಿಧನ

ಶಾಸಕರನ್ನು ವ್ಯವಸ್ಥಾಪನಾ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಸಮಿತಿಯ ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ಕುಮಾರ್ ರೈ, ಹರಿಶ್ಚಂದ್ರ ಕೊಕ್ಕಡ,ಗಣೇಶ್ ಕಾಶಿ ಕೊಕ್ಕಡ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *