Mon. Jun 9th, 2025

Kadaba: ನದಿಗೆ ಸ್ನಾನಕ್ಕೆ ಇಳಿದ ಯುವಕ ನೀರಲ್ಲಿ ಮುಳುಗಿ ಸಾವು

ಕಡಬ(ಜೂ.9) ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಕಡಬದ ಇಚ್ಲಂಪಾಡಿ ಸೇತುವೆ ಬಳಿ ನಡೆದಿದೆ. ಇಚ್ಲಂಪಾಡಿ ಸ ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ ಚೇತನ್ ಶೆಟ್ಟಿ (21) ಮೃತ ಯುವಕ.


ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿರುವ ಚೇತನ್ ರಜೆ ಹಿನ್ನೆಲೆ ಮನೆಯಲ್ಲಿದ್ದರು. ಬೆಳಿಗ್ಗೆ ಗೆಳೆಯರೊಂದಿಗೆ ಕ್ರಿಕೆಟ್ ಆಡಲು ಹೋದ ಚೇತನ್ ಮಧ್ಯಾಹ್ನ ಇಚ್ಲಂಪಾಡಿ ಸ ಸೇತುವೆ ಬಳಿ ಗುಂಡ್ಯ ಹೊಳೆಗೆ ಸ್ನಾನಕ್ಕೆಂದು ಹೋಗಿದ್ದಾರೆ.

ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *