Mon. Jun 9th, 2025

Kayarthadka: ಕುಂಬಾರ ಸೇವಾ ಸಂಘ (ರಿ.) ಕಾಯರ್ತಡ್ಕ ಇದರ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

ಕಾಯರ್ತಡ್ಕ:(ಜೂ.09) ಕುಂಬಾರ ಸೇವಾ ಸಂಘ (ರಿ.) ಕಾಯರ್ತಡ್ಕ ಇದರ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ ಕುಂಬಾರ ಸೇವಾ ಘಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಜರಗಿತು. ಪೂವಪ್ಪ ಕುಂಬಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.

ಇದನ್ನೂ ಓದಿ: 💐💐ಬೆಳ್ತಂಗಡಿ: RED FM ತುಳು ಫಿಲ್ಮ್ ಅವಾರ್ಡ್ಸ್ ನಲ್ಲಿ ದಸ್ಕತ್‌ ಚಲನಚಿತ್ರಕ್ಕೆ ಪ್ರಶಸ್ತಿ

ವೇದಿಕೆಯಲ್ಲಿ ಕುಂಬಾರ ಸೇವಾ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಸಂಜೀವ ಕುಂಬಾರ ಕಾಯರ್ತಡ್ಕ, ಸೇವಾ ಸಂಘದ ಅಧ್ಯಕ್ಷರಾದ ಶ್ರೀಯುತ ಗಣೇಶ್ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಲಲಿತಾಕ್ಷಿ, ಶಾಲಾ ಶಿಕ್ಷಕಿ ಶ್ರೀಮತಿ ವೇದಾವತಿ. ಕುಂಭಶ್ರೀ ಗೆಳೆಯರ ಬಳಗದ ಕಾರ್ಯದರ್ಶಿ ಶ್ರೀ ಹರೀಶ್ ಎಂ, ಕಾಯರ್ತಡ್ಕದ ಕುಂಬಾರ ಸಮಾಜದ ಪ್ರಮುಖರಾದ ಶ್ರೀಯುತ ರಾಘವ ಎಂ ಇವರುಗಳು ಉಪಸ್ಥಿತರಿದ್ದರು.


ಈ ಕಾರ್ಯಕ್ರಮದಲ್ಲಿ ಒಂದರಿಂದ ಹತ್ತನೇ ತರಗತಿಯ ವರೆಗಿನ ಸ್ವಜಾತಿ ಬಾಂಧವರ ಸುಮಾರು 34 ಮಂದಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.


ಇದುವರೆಗೆ ಒಂದು ವರ್ಷಗಳಲ್ಲಿ ಊರ ಮತ್ತು ಪರವೂರರಿಗೆ ಅನಾರೋಗ್ಯದ ನಿಮಿತ್ತ, ವಿದ್ಯಾಭ್ಯಾಸಕ್ಕಾಗಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಸುಮಾರು 60 ಸಾವಿರ ಮೊತ್ತವನ್ನು ಸಹಾಯಧನವನ್ನಾಗಿ ನೀಡಲಾಗಿದ್ದು,
ಈ ಹಿಂದೆ ಖಾದಿ ಗ್ರಾಮೋದ್ಯೋಗ ಸಂಸ್ಥೆಯಿಂದ 20 ಜನರಿಗೆ ತರಬೇತಿಯನ್ನು ನೀಡಿದ್ದು ಇದರ ಪ್ರಮಾಣ ಪತ್ರವನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.


ಪುದುವೆಟ್ಟು ಶಾಲೆಯ ಶಿಕ್ಷಕಿಯಾದ ಶ್ರೀಮತಿ ವೇದವತಿ ಅವರು ವಿದ್ಯೆಯ ಮಹತ್ವ ಮತ್ತು ಹೆಚ್ಚು ಅಂಕಗಳನ್ನು ಪಡೆಯಲು ಯಾವ ರೀತಿ ಪ್ರಯತ್ನ ಪಡಬೇಕು ಎಂಬುದನ್ನು ತಿಳಿಸಿದರು.
ಇನ್ನೋರ್ವ ಮುಖ್ಯ ಅತಿಥಿಯಾದ ಕುಂಬಾರ ಸೇವಾ ಸಂಘದ ಗೌರವಾಧ್ಯಕ್ಷರಾದ ಸಂಜೀವ ಕುಂಬಾರ ಇವರ ಮಾತನಾಡಿ ಕುಂಬಾರ ಸೇವಾ ಸಂಘ ಪ್ರಾರಂಭವಾಗಿದ್ದು ಮೊದಲು ಕಾಯರ್ತಡ್ಕದಿಂದಲೇ ಎಂದು ಹೆಮ್ಮೆಯಿಂದ ತಿಳಿಸಿದರು ಹಾಗೂ ದೈವದೇವರ ಆಚರಣೆ ಹಿಂದೆ ಹೇಗೆ ಮಾಡುತ್ತಿದ್ದರು ಮತ್ತು ಈಗ ಹೇಗೆ ಮಾಡುತ್ತಿದ್ದಾರೆ ಅದನ್ನು ತಿದ್ದಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟರು.


ಕುಂಬಾರ ಸೇವಾ ಸಂಘದ ಅಧ್ಯಕ್ಷರಾದ ಗಣೇಶ್ ಕುಂಬಾರ ಮಾತನಾಡಿ ಕುಂಬಾರ ಸೇವಾ ಸಂಘದ ಏಳಿಗೆಗೆ ಕುಂಭಶ್ರೀ ಗೆಳೆಯರ ಬಳಗ ಸಹಕಾರದಿಂದ ಸಾಧ್ಯವಾಗುತ್ತದೆ. ಎಲ್ಲರ ಸಹಕಾರ ಎಂದೆಂದೂ ಇರಲಿ ಎಂದು ಶುಭ ಹಾರೈಸಿದರು.
ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಪೂವಪ್ಪ ಕುಂಬಾರ ಅವರು ಸಂಘವು ಉತ್ತಮ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ ಇದಕ್ಕೆ ಕುಂಭಶ್ರೀ ಗೆಳೆಯರ ಬಳಗವು ಸಹಕರಿಸುತ್ತಿದೆ ಇನ್ನು ಮುಂದೆ ಇಂತಹ ಕಾರ್ಯಕ್ರಮಗಳು ನಡೆಯಲಿ ಎಂದು ಶುಭ ಹಾರೈಸಿದರು.


ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯ ಮೂಲಕ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಸಂತೋಷ್ ಕುಂಬಾರ ಇವರು ವರದಿಯನ್ನು ಮಂಡಿಸಿದರು, ಯಶೋಧರ ಕುಂಬಾರ ಕಾರ್ಯಕ್ರಮಕ್ಕೆ ಸ್ವಾಗತವನ್ನು ಸಲ್ಲಿಸಿ ಸಂತೋಷ್ ಇವರು ಧನ್ಯವಾದ ಸಲ್ಲಿಸಿ ಕಾರ್ಯಕ್ರಮವನ್ನು ವಿಜಯ್ ಕೆ ಇವರು ನಿರೂಪಿಸಿದರು.

Leave a Reply

Your email address will not be published. Required fields are marked *