Mon. Jun 16th, 2025

Nelyadi: ನಿಂತಿದ್ದ ಹಿಟಾಚಿ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್‌ – ಓರ್ವ ಸಾವು – ಹಲವರಿಗೆ ಗಾಯ

ನೆಲ್ಯಾಡಿ: (ಜೂ.16) ನಿಂತಿದ್ದ ಹಿಟಾಚಿ ಲಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ⭕ಪುತ್ತೂರು: ಗರ್ಭಿಣಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಮೃತ ಪ್ರಯಾಣಿಕರನ್ನು ಕಾರ್ಕಳದ ಹೆರ್ಮುಂಡೆ ಗ್ರಾಮದ ಶಂಕರ ನಾರಾಯಣ ಭಟ್ (58) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ವೀಪರ್ ಬಸ್ ಲಾವತ್ತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿ ಎಕ್ಸ್‌ಕವೇಟರ್‌ಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಹಲವಾರು ಪ್ರಯಾಣಿಕರು ಸಿಕ್ಕಿಹಾಕಿಕೊಂಡು ಗಾಯಗೊಂಡಿದ್ದಾರೆ.

15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಪುತ್ತೂರು ಹಾಗೂ ಮಂಗಳೂರು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *