Mon. Jun 16th, 2025

Balanja: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಬಳಂಜ :(ಜೂ.16) ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ & ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದನ್ನೂ ಓದಿ: 🟢ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ಅಶೋಕ್ ರವರು ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ , ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮನುಷ್ಯರು ಬದುಕಬೇಕಾದರೆ ಪರಿಸರ ನಮಗೆ ತೀರಾ ಅವಶ್ಯವಾಗಿ ಬೇಕು ಗಿಡವನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಯೋಜನೆಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಪ್ರಮೋದ್ ಕುಮಾರ್ ಜೈನ, ರವರು ಮಾತನಾಡಿ ಕಾಡಿನಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುತ್ತದೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗುತ್ತದೆ , ಆದ್ದರಿಂದ ಎಲ್ಲರೂ ಗಿಡ ಗಳನ್ನು ನೆಟ್ಟು ಅದರ ರಕ್ಷಣೆ ಮಾಡಬೇಕು ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದೇಜಪ್ಪ ಪೂಜಾರಿ, ಬಳಂಜ ಗ್ರಾಮ ಪಂಚಾಯತ್ ಸದಸ್ಯೆ & ವಿಪತ್ತು ಘಟಕ ದ ಬೇಬಿ ನಾರಾಯಣ, ಸ್ವಚ್ಛತಾ ಸೇನಾನಿ ಅಬೂಬಕ್ಕರ್, ತಾಲೂಕು ನೋಡಲ್ ಅಧಿಕಾರಿ ಸುರೇಶ್ , ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿ ಪ್ರಮೀಳಾ & ಪ್ರಗತಿ ಬಂಧು, ಸ್ವಸಹಾಯ & ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *