ಉಜಿರೆ(ಜೂ.27): ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಉಜಿರೆಯಲ್ಲಿ ವೈದ್ಯ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಾಗಿರುವ ಡಾ.ಪ್ರದೀಪ್ ಅವರು ಜೂ.27 ರಂದು 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಇದನ್ನೂ ಓದಿ: 🔴ಪುತ್ತೂರು: ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ನಾವು ಪಡೆದಿರುವ ಜ್ಞಾನ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ಎಲ್ಲರೊಳಗೆ ಒಂದಾಗಲು ಸಂಘಗಳು ಪ್ರೇರಕ” ಎಂದು ಹೇಳಿದರು.
ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ಕನ್ನಡ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಾದ ಅಕ್ಷಮ್ ಜೈನ್ ಹಾಗೂ ಅವನಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಸಾವನ್ ವಂದಿಸಿದರು.


