Tue. Jul 1st, 2025

Puttur: ಪುತ್ತೂರಿನಲ್ಲಿ ಯುವತಿಗೆ ವಂಚನೆ ಪ್ರಕರಣ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ

ಪುತ್ತೂರು:(ಜು.1) ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ⭕ಸುಬ್ರಹ್ಮಣ್ಯ: ಕೆಎಸ್ಆರ್‌ಟಿಸಿಯಲ್ಲಿ ಸಮಸ್ಯೆಗಳಿಲ್ಲ , ದಕ್ಷಿಣ ಕನ್ನಡ ಜಿಲ್ಲೆಗೆ ಆದ್ಯತೆ ನೀಡಲಾಗುತ್ತಿದೆ – ಸಚಿವ ರಾಮಲಿಂಗ ರೆಡ್ಡಿ

ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ.ರಾವ್‌(21ವ)ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ ಆತನ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಆರೋಪಿ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಈ ಮಧ್ಯೆ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜೂ.30ರಂದು ನಡೆದು ಮುಂದಿನ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ.

Leave a Reply

Your email address will not be published. Required fields are marked *