ಕಾಸರಗೋಡು:(ಜು.20) ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು ಇದರ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗವು ಕಾಸರಗೋಡಿನ ಪೊಸಡಿಗುಂಪೆ ಶ್ರೀ ಶಂಕರ ಧ್ಯಾನ ಮಂದಿರದ ಸಹಯೋಗದೊಂದಿಗೆ ವನ ಜೀವನ ಯಜ್ಞ-2025 ಕಾರ್ಯಕ್ರಮವನ್ನು ದಿನಾಂಕ 19-07-2025ನೇ ಶನಿವಾರದಂದು ಪೊಸಡಿಗುಂಪೆಯ ಶ್ರೀ ಶಂಕರ ಧ್ಯಾನ ಮಂದಿರದ ಪರಿಸರದಲ್ಲಿ ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ ಧ್ಯಾನ ಮಂದಿರದ ಅಧ್ಯಕ್ಷರಾದ ಶ್ರೀ ಕಕ್ವೆ ಶಂಕರ್ ರಾವ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೇರಳ ಅರಣ್ಯ ಇಲಾಖೆಯಿಂದ ಒದಗಿಸಲಾದ ವಿವಿಧ ತಳಿಯ 100ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಇಂಗು ಗುಂಡಿ ಅಭಿವೃದ್ಧಿಪಡಿಸುವುದರ ಬಗ್ಗೆ ಮಾಹಿತಿ ನೀಡಲಾಯಿತು.


ಪ್ರಾಧ್ಯಾಪಕರಾದ ಪ್ರೊ. ಗಣರಾಜ್ ಕರುವಜೆ ಅವರು ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ ಶ್ರೀ ಸತ್ಯಪ್ರಕಾಶ ಇ ಕೆ, ಶ್ರೀ ಕೇಶವ ಪ್ರಸಾದ್ ಎಡಕ್ಕಾನ ಮತ್ತು ಅವರ ಕುಟುಂಬ ಸದಸ್ಯರು ಮತ್ತು ಇತರ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಸಹಕರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಅಂತಿಮವಾಗಿ, ಸಮೀಪದ ಶಿರಿಯಾ ಅಣೆಕಟ್ಟಿಗೆ ಭೇಟಿ ನೀಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

