Mon. Nov 3rd, 2025

Bengaluru: ದ್ವಿಚಕ್ರ ವಾಹನಕ್ಕೆ ಅಂಬ್ಯುಲೆನ್ಸ್​ ಡಿಕ್ಕಿ – ದಂಪತಿ ಮೃತ್ಯು – ಅಂಬ್ಯುಲೆನ್ಸ್ ಚಾಲಕ ಪರಾರಿ

ಬೆಂಗಳೂರು :(ಅ. 2) ಅಂಬ್ಯುಲೆನ್ಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ಶಾಂತಿನಗರದ ಕೆ.ಎಚ್.ರಸ್ತೆಯ ಸಂಗೀತಾ ಸಿಗ್ನಲ್ ಬಳಿ ನಡೆದಿರುವುದು ವರದಿಯಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇಸ್ಮಾಯಿಲ್ ಹಾಗೂ ಸಮೀನ್ ಬಾನು ಮೃತರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ⭕ಬೆಂಗಳೂರು: ಲೈಟ್‌ ಆಫ್‌ ಮಾಡು ಎಂದ ಸಿಟ್ಟಿಗೆ ಮ್ಯಾನೇಜರ್‌ನನ್ನೇ ಕೊಂದ ಉದ್ಯೋಗಿ


ರಿಚ್ಮಂಡ್ ರಸ್ತೆಯ ಕಡೆಯಿಂದ ವೇಗವಾಗಿ ಬಂದ ಆಂಬ್ಯುಲೆನ್ಸ್ ಚಾಲಕ, ಊರ್ವಶಿ ಚಿತ್ರಮಂದಿರ ಕಡೆಯಿಂದ ವಿಲ್ಸನ್ ಗಾರ್ಡನ್ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪಘಾತವೆಸಗಿದ್ದಾನೆ. ಅಂಬ್ಯುಲೆನ್ಸ್ ಕೆಳಗೆ ಸಿಲುಕಿದ್ದ ದ್ವಿಚಕ್ರ ವಾಹನವನ್ನು 20- 30 ಮೀಟರ್ ಎಳೆದುಕೊಂಡು ಚಲಾಯಿಸಿದ್ದಾನೆ ಎನ್ನಲಾಗಿದೆ.

ಬಳಿಕ ಟ್ರಾಫಿಕ್ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದು ಅಂಬ್ಯುಲೆನ್ಸ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಬಂದು ಅಂಬ್ಯುಲೆನ್ಸ್ ಪಲ್ಟಿ ಮಾಡಿ ಪರಿಶೀಲಿಸಿದಾಗ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಅಂಬ್ಯುಲೆನ್ಸ್‌ ಅಡಿ ಸಿಲುಕಿ ಮೃತಪಟ್ಟಿರುವುದು ಗೊತ್ತಾಗಿದೆ. ಖಾಸಗಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ‌ ಅಪಘಾತ ಸಂಭವಿಸಿರುವ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *