ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಧರ್ಮಸ್ಥಳದಲ್ಲಿ ನಡೆಯಿತು.

ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದನ್ನೂ ಓದಿ: 🛑ಪುತ್ತೂರು: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ, ವಿವಿಧ ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು.





