Sat. Apr 19th, 2025

Mangalore: ಬ್ರೆಝಿಲ್ ಮೂಲದ ಯುವತಿಯನ್ನು ವರಿಸಿದ ತುಳುನಾಡಿನ ಯುವಕ

ಮಂಗಳೂರು:(ಆ.12) ಪ್ರೀತಿ, ಪ್ರೇಮಕ್ಕೆ , ದೇಶ, ಗಡಿಯ ಬೇಲಿ ಇಲ್ಲ ಎಂಬುದಕ್ಕೆ ಮತ್ತೂಂದು ನಿದರ್ಶನ ಸಿಕ್ಕಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿ ಪರಸ್ಪರ ಪ್ರೀತಿಸಿದ್ದು, ಭಾರತೀಯ ಸಂಪ್ರದಾಯದಂತೆ ವಿವಾಹವಾಗಿ ಕರಾವಳಿಯ ಸಂಸ್ಕೃತಿಯನ್ನು ಜಾಗತಿಕವಾಗಿ ಎತ್ತಿಹಿಡಿದಿದ್ದಾರೆ.

ಇದನ್ನೂ ಓದಿ: 🐍🦡ಪಾಟ್ನಾ: ಪಾಟ್ನಾ ಏರ್‌ಪೋರ್ಟ್‌ನಲ್ಲಿ ಹಾವು-ಮುಂಗುಸಿ ಕಾಳಗ

ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ತುಳುನಾಡಿನ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್‌ಬಿ ಸಂಪ್ರದಾಯದಂತೆ ಮಂಗಳೂರಿನ ಡಾ. ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನೆರವೇರಿದೆ.

ಕರಂಗಲ್ಪಾಡಿ ನಿವಾಸಿ ಆದಿತ್ಯ 8 ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್‌ಗೆ ತೆರಳಿದ್ದು, 2019ರಲ್ಲಿ ಅವರಿಗೆ ತಾಟಿಯಾನೆ ಪರಿಚಯವಾಗಿತ್ತು. ಬಳಿಕ ಸ್ನೇಹವು ಪ್ರೀತಿಗೆ ತಿರುಗಿತ್ತು. 2023ರಲ್ಲಿ ಮನೆಯವರಿಗೆ ತಮ್ಮ ಪ್ರೀತಿಯ ಸಂಗತಿಯನ್ನು ತಿಳಿಸಿ ಮದುವೆಗೆ ಒಪ್ಪಿಗೆ ಪಡೆದುಕೊಂಡರು. ಆದಿತ್ಯ ಹಾಗೂ ತಾಟಿಯಾನೆ ಅವರ ಹೆತ್ತವರು ಹಾಗೂ ಗುರು ಹಿರಿಯರ ಆಶೀರ್ವಾದದೊಂದಿಗೆ ಹಸೆಮಣೆ ಏರಿದ್ದಾರೆ.

ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದ ಆಭರಣ ಧರಿಸಿಕೊಂಡು ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಯಿಸ್, ಥಲಿತ ಹಾಗೂ ವರನ ಪೋಷಕರಾದ ರಮಾನಂದ್ ಹಾಗೂ ಪ್ರೀತಂ ಪೈ ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *