Sat. Apr 19th, 2025

Puttur : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ

ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ

ಪುತ್ತೂರು (ಸೆ. 22) : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಆಕ್ಟಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯವಾಗಿದೆ. ಗಂಭೀರ ಗಾಯಗೊಂಡಿರುವ ಆಕ್ಟಿವಾ ಸವಾರನನ್ನು ಹೋಳಿಗೆ ವ್ಯಾಪಾರಿ, ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಂದಿರಾ ನಗರ ನಿವಾಸಿ ಗಣೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟವರು. ಇವರು ಹೋಳಿಗೆ ವ್ಯಾಪಾರ ಮಾಡುತ್ತಿದ್ದು, ಪ್ರತಿ ಅಂಗಡಿ, ಮನೆಗಳಿಗೆ ತೆರಳಿ ಮಾರಾಟ ಮಾಡುತ್ತಿದ್ದರು. ಎಲ್ಲರಿಗೂ ಚಿರಪರಿಚಿತರಾಗಿದ್ದರು.ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಆಕ್ಟಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯಗೊಂಡಿದ್ದರು. ಕಾರು ಚಾಲಕನ ಅಜಾಗರೂಕತೆಗೆ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *