Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Dhanraj Achar: ಬಿಗ್‌ ಬಾಸ್‌ ನ ಮೂರನೇ ಕಂಟೆಸ್ಟೆಂಟ್‌ ಆಗಿ ಟಿಕ್‌ ಟಾಕ್‌ ಸ್ಟಾರ್‌ ಧನರಾಜ್ ಆಚಾರ್‌ ಎಂಟ್ರಿ – ವೇದಿಕೆಯಲ್ಲೇ ಕಂಟೆಸ್ಟೆಂಟ್ ಧನರಾಜ್ ಆಚಾರ್ ವಿರುದ್ಧ ಸಿಡಿದೆದ್ದ ಕಿಚ್ಚ ಸುದೀಪ್!! ಅಷ್ಟಕ್ಕೂ ಆಗಿದ್ದೇನು ಗೊತ್ತಾ?

Dhanraj Achar:(ಸೆ.30) ಹಾಸ್ಯ ವಿಡಿಯೋಗಳ ಮೂಲಕ ಸಾಮಾಜಿಕ ಕಳಕಳಿಗೂ ಹೆಚ್ಚು ಒತ್ತು ನೀಡುವ ಕರಾವಳಿಯ ಯುವಕ, ಬಹುಮುಖ ಪ್ರತಿಭೆಯ ಕಲಾವಿದ, ಯುಟ್ಯೂಬರ್ 33 ವರ್ಷದ ಧನರಾಜ್ ಆಚಾರ್ಯ ಕಲರ್ಸ್ ವಾಹಿನಿಯ ಪ್ರಸಿದ್ದ ರಿಯಾಲಿಟಿ ಶೋ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.

ಇದನ್ನೂ ಓದಿ: 🟣ಬೆಳ್ತಂಗಡಿ : ರಿಷಿಕಾ ಕುಂದೇಶ್ವರ್‌ ಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ


ಧನರಾಜ್ ಆಚಾರ್ಯ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿದ್ದು, ಕನ್ನಡಿಗರಿಗೆ ಟಿಕ್‌ಟಾಕ್ ಸ್ಟಾರ್ ಎಂದೇ ಪರಿಚಿತರಾಗಿದ್ದರು. ಇವರು ಜರ್ನಲಿಸಂ ಪದವೀಧರನಾಗಿದ್ದು, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.

ತನ್ನ ಇಡೀ ಕುಟುಂಬದೊಂದಿಗೆ ವಿಭಿನ್ನವಾದ ವಿಡಿಯೋಗಳನ್ನು ಮಾಡುತ್ತಾ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುವ ಕಾರಣಕ್ಕೆ ಧನರಾಜ್ ತನ್ನ ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದಾರೆ.


ಮಗುವಿನಿಂದ ಬಂದ ಅದೃಷ್ಟ…!:

ಬಿಗ್ ಬಾಸ್ ಮನೆಯ ಆಫರ್ ಧನ್ ರಾಜ್ ಪತ್ನಿ ಪ್ರಜ್ಞಾ ಹೆಣ್ಣುಮಗುವಿಗೆ ಜನ್ಮ ನೀಡಿದ ಕೆಲವೇ ಸಮಯದಲ್ಲಿ ಬಂದಿದ್ದು, ಹೀಗಾಗಿ ಇದು ಮಗುವಿನಿಂದ ಬಂದ ಅದೃಷ್ಟ ಎಂದು ಮನೆಮಂದಿ ಹೇಳಿಕೊಳ್ಳುತ್ತಿದ್ದಾರೆ. ಇದೀಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡೋ ಧನ್ ರಾಜ್ ಒಂದು ತಿಂಗಳ ಮಗುವನ್ನು ಬಿಗಿದಪ್ಪಿ ಮುದ್ದಿಸಿ ಟಾಟಾ ಹೇಳಿ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಟಿಕ್ ಟಾಕ್ ಸ್ಟಾರ್ ಬಿಗ್ ಬಾಸ್ ಮನೇನಲ್ಲಿ ಏನ್ ಮಾಡ್ತಾರೆ ಅನ್ನೋದನ್ನ ಕಾದು ನೋಡೋಕಾಗಿದೆ.

ವೇದಿಕೆಯಲ್ಲೇ ಕಂಟೆಸ್ಟೆಂಟ್ ಧನರಾಜ್ ಆಚಾರ್ ವಿರುದ್ಧ ಸಿಡಿದೆದ್ದ ಕಿಚ್ಚ ಸುದೀಪ್!!:

ಬಿಗ್ ಬಾಸ್ ಆರಂಭದ ವೇದಿಕೆಯಲ್ಲಿ ಕಿಚ್ಚ ಸುದೀಪ್, ಧನರಾಜ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಬಿಗ್ ಬಾಸ್ ಬಗ್ಗೆ ಧನರಾಜ್ ಅವರು ಒಂದು ವಿಡಿಯೋ ಮಾಡಿದ್ದರು. ಜಗಳ ನಡೆಯೋದು ಟಿಆರ್​ಪಿಗಾಗಿ ಎಂದು ಅವರು ಹೇಳಿದ್ದರು. ಈ ವಿಡಿಯೋನ ಪ್ಲೇ ಮಾಡಲಾಯಿತು. ಆ ಬಳಿಕ ಸುದೀಪ್ ಗಂಭೀರವಾಗಿ ಕ್ಲಾಸ್ ತೆಗೆದುಕೊಂಡರು.

ನಾವು ಹೆಂಗ್ ಕಾಣಿಸ್ತೀವಿ? ನಾನು ತಮಾಷೆ ಮಾಡೋ ಹಾಗೆ ಕಾಣ್ತಾ ಇದೀನಾ? ಜಗಳ ಮಾಡೋದು ಟಿಆರ್​ಪಿಗಾ? ನಾನು ನೋಡಿದನ್ನು ಬದಲಾಯಿಸಿಕೊಳ್ಳೋಕೆ ಆಗಲ್ಲ. ಗೌರವ ಇಲ್ಲದ ವ್ಯಕ್ತಿನಾ ಏಕೆ ಕಳುಹಿಸುತ್ತಿದ್ದೀರಿ ಎಂದು ಸುದೀಪ್ ಪ್ರಶ್ನೆ ಮಾಡಿದರು. ಆಗ ‘ನಾನು ಮಾಡಿರೋದು ತಮಾಷೆಗೆ. ಇದನ್ನು ಗಂಭೀರವಾಗಿ ಸ್ವೀಕರಿಸಬೇಡಿ’ ಎಂದು ಧನರಾಜ್ ಕೇಳಿಕೊಂಡರು. ಆ ಬಳಿಕ ಸುದೀಪ್ ನಕ್ಕರು. ಆಗ ಧನರಾಜ್ ನಿಟ್ಟುಸಿರು ಬಿಟ್ಟರು.

ಇನ್ನು “ಬಿಗ್ ಬಾಸ್ ಕನ್ನಡ ಸೀಸನ್ 11″ರಲ್ಲಿ ಕಾಮಿಡಿ ಹೆಚ್ಚಿರಲಿ ಎಂದು ಪ್ರೇಕ್ಷಕರು ನಿರೀಕ್ಷಿಸುತ್ತಿದ್ದರು. ಈಗ ಧನರಾಜ್ ಆಚಾರ್ ಅವರು ದೊಡ್ಮನೆಗೆ ಬಂದಿರೋದ್ರಿಂದ ಹಾಸ್ಯವನ್ನು ನಿರೀಕ್ಷಿಸಬಹುದು.

Leave a Reply

Your email address will not be published. Required fields are marked *