Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Ujire: ಸ.ಉ.ಪ್ರಾ.ಶಾಲೆ ಬದನಾಜೆ ಇದರ ನೂತನ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮ – ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಆರಿಕೋಡಿ

ಉಜಿರೆ:(ಅ.9) ಸಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಬೆಳಗ್ಗಿನ ಪ್ರಾರ್ಥನೆ, ಮಧ್ಯಾಹ್ನದ ಭೋಜನ ವ್ಯವಸ್ಥೆ ಗೆ,ಸಭೆ ಸಮಾರಂಭಗಳಿಗೆ ಅನುಕೂಲವಾಗುವಂತೆ ಬಹುಪಯೋಗಿ ಸಭಾಂಗಣ ರಚನೆಗೆ,ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಹರೀಶ್ ರವರು ಶಿಲಾನ್ಯಾಸಗೈದು ಶುಭ ಹಾರೈಸಿದರು.

ಇದನ್ನೂ ಓದಿ: ⭕ದಿಡುಪೆಯಲ್ಲಿ ಮತ್ತೆ ಮಹಾ ಪ್ರವಾಹ…!

ಕಾರ್ಯಕ್ರಮದ ಧಾರ್ಮಿಕ ವಿಧಿ ವಿಧಾನಗಳನ್ನು ಸ್ಥಳೀಯ ಕೋರ್ಯಾರು ಗುತ್ತುವಿನ ಆಡಳಿತ ಮೋಕ್ತೆಸರರಾದ ಗೋಪಾಲಕೃಷ್ಣ ಉಪಾಧ್ಯಾಯರು ನೆರವೇರಿಸಿದರು. ಈ ಸಭಾಂಗಣವನ್ನು ಸುಮಾರು 15 ಲಕ್ಷ ಮೊತ್ತದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲು ಉದ್ದೇಶಿಸಿದ್ದು ಶಾಲಾ ಹಳೆ ವಿದ್ಯಾರ್ಥಿಗಳ, ‘ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ’ ಪೋಷಕರು,ದಾನಿಗಳ ನೆರವಿನಿಂದ ಈ ಕಾರ್ಯಕ್ಕೆ ಮುಂದಾಗಿದೆ.

ಈ ಸಂದರ್ಭದಲ್ಲಿ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮಯ್ಯಗೌಡ ಮಾಚಾರು, ಸುಜ್ಞಾನ ನಿಧಿ ಯೋಜನೆಯ ಸಂಚಾಲಕರಾದ ಸುಂದರ ಬಂಗೇರ, ಸಹ ಸಂಚಾಲಕರಾದ ಸೋಮಶೇಖರ್ ಕೆ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಅನಿಲ್ ಡಿಸೋಜ, ಗ್ರಾ.ಪಂ.ಸದಸ್ಯರಾದ ಬಿ..ಎಂ. ಇಲ್ಯಾಸ್, ಶ್ರೀಮತಿ ಸವಿತಾ ಮತ್ತು ಶ್ರೀಮತಿ ಲಲಿತ , ಭಜನಾ ಮಂಡಳಿ ಅಧ್ಯಕ್ಷ ಸನತ್ ಕುಮಾರ್, ಪ್ರಗತಿ ಯುವಕ ಮಂಡಲ ಅಧ್ಯಕ್ಷರಾದ ಪಿತಾಂಬರ ಪೂಜಾರಿ, ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ನವೀನ, ನಿವೃತ್ತ ಶಿಕ್ಷಕರಾದ ಬಾಬುಗೌಡ ಬಾಜಿಮಾರು, ಬದನಾಜೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಜಮುನಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ ಸ್ವಾಗತಿಸಿದರು. ಶಿಕ್ಷಕರಾದ ಸುರೇಶ್ ಮಾಚಾರ್ ವಂದಿಸಿದರು.ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್,ಶಿಕ್ಷಕಿ ಜಯಲಕ್ಷ್ಮಿ ಸಹಕರಿಸಿದರು.

Leave a Reply

Your email address will not be published. Required fields are marked *