Sat. Apr 19th, 2025

Ujire: ಸೇವಾಭಾರತಿ ಸಂಸ್ಥೆಯ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಉಜಿರೆಯ ರಬ್ಬರ್ ಸೊಸೈಟಿಯಿಂದ ಚೆಕ್ ವಿತರಣೆ

ಉಜಿರೆ:(ನ.16) ಬೆಳ್ತಂಗಡಿ ತಾಲೂಕು, ರಬ್ಬರ್ ಗ್ರೋವರ್ಸ್ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ
ಅಧ್ಯಕ್ಷರಾದ ಶ್ರೀಧರ್ ಬಿಢೆ,

ಇದನ್ನೂ ಓದಿ: 🟣ಮೊಗ್ರು: ಮೊಗ್ರು ಗ್ರಾಮದ ಅಲೆಕ್ಕಿ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ

ಉಪಾಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ, ಕಾರ್ಯನಿರ್ವಹಣಾಧಿಕಾರಿಯವರಾದ ರಾಜು ಶೆಟ್ಟಿ ಇವರ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ ನೀಡಿ,

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಸೊಸೈಟಿಯಿಂದ ರೂ. 50,000 ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Leave a Reply

Your email address will not be published. Required fields are marked *